ಬೆಳ್ಳಿಯ ದೀಪಗಳು - ಹಿತ್ತಾಳೆಯ ದೀಪಗಳು - ಏನು ಇವುಗಳ ವಿಶೇಷತೆಗಳು? Silver or Brass Deepa - which is the best?
ಬೆಳ್ಳಿಯ ದೀಪಗಳು - ಹಿತ್ತಾಳೆಯ ದೀಪಗಳು - ಏನು ಇವುಗಳ ವಿಶೇಷತೆಗಳು? Silver or Brass Deepa - which is the best? "ಹಿತ್ತಾಳೆ" ದೀಪದಿಂದ ದೇವರಿಗೆ ದೀಪ ಹಚ್ಚಿದರೆ ಏನು ಫಲ..? ೧. ಯಾರ ಮನೆಯಲ್ಲಿ ದೇವರಿಗೆ ಹಿತ್ತಾಳೆ ದೀಪವನ್ನು ಹಚ್ವುತ್ತಾರೆಯೋ ಆ ಮನೆಯಲ್ಲಿ ದೇವರಿಗೆ ತೇಜಸ್ಸು ಜಾಸ್ತಿಯಾಗುತ್ತದೆ, ಮನೆಗೆ ದೈವಬಲ ಬರುವುದು.. ೨. ಯಾರ ಮನೆಯಲ್ಲಿ ದೇವರಿಗೆ ಹಿತ್ತಾಳೆ ದೀಪ ಹಚ್ಚಿ ದೇವರನ್ನು ಪೂಜಿಸುತ್ತಾರೋ ಆ ಮನೆಯಲ್ಲಿ ರೋಗಭಾದೆಗಳು, ಅಪಮೃತ್ಯುಗಳು ಬರುವುದಿಲ್ಲ..! ೪. ಯಾರ ಮನೆಯಲ್ಲಿ ಸಂಕಲ್ಪ ಸಮೇತ ಹಿತ್ತಾಳೆ ದೀಪವನ್ನು ಹಚ್ಚಿ, ದೀಪಕ್ಕೆ ಪೂಜಿಸಿ, ದೇವರ ಪೂಜೆ ಮಾಡುತ್ತಾರೋ, ಆ ಮನೆಯಲ್ಲಿ ನ ಸರ್ವ ವಿವಾಹ ದೋಷ ನಿವಾರಣೆಯಾಗಿ, ವಿಘ್ನಗಳು ನಿವಾರಣೆಯಾಗಿ ವಿವಾಹ ಯೋಗವು ಬರುತ್ತದೆ..! ೬. ಮಂತ್ರಸಿದ್ಧಿ ಬೇಕೆನ್ನುವರು ಹಿತ್ತಾಳೆ ದೀಪ ಹಚ್ಚಿ ಪೂಜಿಸಿದರೆ ಮಂತ್ರವು ಬೇಗ ಸಿದ್ಧಿಯಾಗುವುದು..! ನವಗ್ರಹ ಮತ್ತು ದೀಪರಾಧನೆ ಓಂನಮಃ ಸೂರ್ಯಾಯ ಚಂದ್ರಾಯ ಮಂಗಳಾಯ ಬುದಾಯಚ ಗುರು ಶುಕ್ರ ಶನಿಭ್ಯಶ್ಚ ರಾಹವೇ ಕೇತವೇ ನಮಃ ಈ ಮಂತ್ರವನ್ನು ಪಠಿಸಿ ಬೆಳ್ಳಿ ದೀಪವನ್ನು ಹಚ್ಚುವುದರಿಂದ ನವಗ್ರಹ ಶಾಂತಿಯ ಫಲಪ್ರಾಪ್ತಿಯಾಗುತ್ತದೆ. ಸೂರ್ಯ ಜಪಾ ಕುಸುಮ ಸಂಕಾಶಂ ಕಾಶ್ಯಪೇಯಂ ಮಹಾದ್ಯುತಿಮ್ ತಮೋರಿಂ ಸರ್ವ ಪಾಪಘ್ನಂ ಪ್ರಣತೋಸ್ಮಿ ದಿವಾಕರಂ ಈ ಮಂತ್ರದೊಂದಿಗೆ ಸೂರ್ಯ ದೇವರಿಗೆ ಬೆಳ್ಳಿಯ ನಿರಾಜನ ಬೆಳಗುವುದರಿಂದ ಸೂರ್ಯ ಸಂಪ್ರೀತನಾಗುತ್ತಾನೆ, ಸೂರ್ಯನಿಗೆ ಬೆಳ್ಳಿ ದೀಪ ಬೆಳಗುವುದರಿಂದ ಬಡತನ ನಿವಾರಣೆಯಾಗುತ್ತದೆ, ಆರೋಗ್ಯ ಪ್ರಾಪ್ತಿಯಾಗುತ್ತದೆ, ಶತ್ರು ದಮನವಾಗುತ್ತದೆ. ದೀಪ ಬೆಳಗಿದವನು ತೇಜೋವಂತನಾಗುತ್ತಾನೆ. ಆದಿತ್ಯ ಹೃದಯ ವನ್ನು ಪಠಿಸಿ ಬೆಳ್ಳಿ ದೀಪವನ್ನು ಬೆಳಗಿದರಂತೂ ರಾಜಯೋಗ ದೊರೆತು ಅಧಿಕಾರ ಪ್ರಾಪ್ತವಾಗುತ್ತದೆ. ಚಂದ್ರ ಶ್ರೀಮಾನ್ ಶಶಿಧರಶ್ಚಂದ್ರೋ ತಾರಾಧೀಶೋ ನಿಶಾಕರಃ ಸುಧಾನಿಧಿಸ್ಸದಾರಾಧ್ಯಸ್ಸತ್ಪತಿಸ್ಸಾಧು ಪೂಜಿತಃ ಈ ಮಂತ್ರದೊಂದಿಗೆ ಚಂದ್ರನಿಗೆ ಬೆಳ್ಳಿ ದೀಪ ಬೆಳಗುವುದರಿಂದ ಬೆಳಗಿದವರು ಕಾಂತಿವಂತರೂ , ತೇಜೋವಂತರೂ ಆಗುತ್ತಾರೆ. ಕಟಕ ಲಗ್ನ ಅಥವಾ ಕಟಕ ರಾಶಿಗೆ ಅಧಿಪತಿ ಚಂದ್ರನಾಗಿರುವುದರಿಂದ ಕಟಕ ರಾಶಿಯವರು ಬೆಳ್ಳಿದೀಪಾರಾಧನೆ ಮೂಲಕ ಚಂದ್ರನನ್ನು ಪೂಜಿಸಿದರೆ ಶುಭಫಲಗಳು ಶತಸಿದ್ಧ. ಮಂಗಳ ಮಹಿಸುತೋ ಮಹಾಭಾಗೋ ಮಂಗಲೋ ಮಂಗಲಪ್ರದಃ ಮಹಾವೀರೋ ಮಹಾಶೂರೋ ಮಹಾಬಲ ಪರಾಕ್ರಮಃ ಈ ಮಂತ್ರದ ಮೂಲಕ ಮತ್ತು ಕುಜ ಅಷ್ಟೋತ್ತರ ಸ್ತೋತ್ರಗಳ ಪಠನದ ಮೂಲಕ ಬೆಳ್ಳಿ ದೀಪ ಬೆಳಗಿದಲ್ಲಿ ಕುಜ ದೋಷದ ಪರಿಹಾರ ಸಾಧ್ಯ ಮತ್ತು ಮನದ ಉದ್ವೇಗ ಕಡಿಮೆಯಾಗುತ್ತದೆ. ಯಾರಿಗೆ ಅಧಿಕ ರಕ್ತದೊತ್ತಡ ಇದೆಯೋ ಅವರು ದೀಪ ಬೆಳಗಿದಲ್ಲಿ ರಕ್ತದೊತ್ತಡ ಕಡಿಮೆ ಮಾಡಬಹುದು. ಬುಧ ಬುಧೋ ಬುಧಾರ್ಚಿತಃ ಸೌಮ್ಯಃ ಚಿತ್ತಃ ಶುಭಪ್ರದಃ ದೃಢವ್ರತೋ ದೃಢಫಲಃ ಶ್ರುತಿಚಾಲ ಪ್ರಭೋಧಕಃ ಈ ಮಂತ್ರದ ಪಠನದ ಮೂಲಕ ದೀಪ ಬೆಳಗಿದಲ್ಲಿ ಶುಭಫಲ ಲಭ್ಯವಾಗುವುದು. ಬುದ್ಧಿಶಕ್ತಿಗೆ ಕಾರಕ ಗ್ರಹ ಬುಧ. ಮಿಥುನ ಮತ್ತು ಕನ್ಯಾರಾಶಿಯವರಿಗೆ ಬುಧ ಅಧಿಪತಿ. ಈ ಜಾತಕರು ಬುಧನ ಆರಾಧನೆ ಮಾಡಿದರೆ ಉತ್ತಮ. ಇತರ ಜಾತಕರಿಗೂ ಒಳ್ಳೆ ಫಲ ಇದೆ, ಸ್ವಂತ ವ್ಯವಹಾರ ಮಾಡುವವರು ಬೆಳ್ಳಿ ದೀಪ ಬೆಳಗಿದಲ್ಲಿ ಅಭಿವೃಧ್ಹಿ ಕಾಣುವರು, ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ನಿರೀಕ್ಷಿತ ಫಲಿತಾಂಶ ಸಿಗುತ್ತದೆ. ಗುರು ದೇವಾನಾಂಚ ಋಷೀಣಾಂಚ ಗುರುಂ ಕಾಂಚನ ಸನ್ನಿಭಂ ಬುದ್ದಿಭೂತಂ ತ್ರಿಲೋಕೇಶಂ ತಂ ನಮಾಮಿ ಬೃಹಸ್ಪತಿಂ ದೇವಮಂತ್ರೀ ವಿಶಾಲಾಕ್ಷಃ ಸದಾ ಲೋಕಹಿತೇರತಃ ಅನೇಕ ಶಿಷ್ಯ ಸಂಪೂರ್ಣಂ ಪೀಡಾಂ ಹರತು ಮೇ ಗುರುಃ ಈ ಮಂತ್ರ ಪಠಿಸಿ ಬೆಳ್ಳಿ ದೀಪವನ್ನು ಕಡಲೆಕಾಯಿ ಎಣ್ಣೆ ಬಳಸಿ ಬೆಳಗಿಸಿದರೆ ಗುರು ಸಂಪ್ರೀತನಾಗುತ್ತಾನೆ. ಎಲ್ಲಾ ವಿಧದ ಜಯಗಳನ್ನು ಕೊಡುತ್ತಾನೆ ಮತ್ತು ಉದರ ಸಂಬಂಧೀ ಕಾಯಿಲೆಗಳು ಶಮನವಾಗುತ್ತದೆ. ಶುಕ್ರ ಹಿಮಕುಂದ ಮೃಣಾಲಾಭಂ ದೈತ್ಯಾನಾಂ ಪರಮಂ ಗುರುಂ ಸರ್ವಶಾಸ್ತ್ರ ಪ್ರವಕ್ತಾರಂ ಭಾರ್ಗವಂ ಪ್ರಣಮಾಮ್ಯಹಂ ದೈತ್ಯ ಮಂತ್ರೀ ಗುರುಸ್ತೇಷಾಂ ಪ್ರಾಣದಸ್ಯ ಮಹಾಮತಿಃ ಪ್ರಭುಸ್ತಾರಾ ಗ್ರಹಾಣಾಂಚ ಪೀಡಾಂ ಹರತು ಮೇ ಭೃಗು ಈ ಮಂತ್ರದ ಮೂಲಕ ಬೆಳ್ಳಿ ದೀಪ ಬೆಳಗಿಸಿದಲ್ಲಿ ಕೌಟುಂಬಿಕ ಸಮಸ್ಯೆಗಳ ಪರಿಹಾರ ಸಾಧ್ಯ ಮತ್ತು ಪತಿ ಪತ್ನಿಯರ ಭಿನ್ನಾಭಿಪ್ರಾಯ ದೂರವಾಗಿ ಸಾಮರಸ್ಯ ಏರ್ಪಡುತ್ತದೆ. ಶುದ್ಧ ತುಪ್ಪವನ್ನು ಬಳಸಿ ದೀಪ ಬೆಳಗುವುದರಿಂದ ಪಿತ್ರಾರ್ಜಿತ ಆಸ್ತಿಯು ದೊರಕುತ್ತದೆ. ಶನಿ ನೀಲಾಂಜನ ಸಮಾಭಾಸಂ ರವಿಪುತ್ರಂ ಯಮಾಗ್ರಜಂ ಛಾಯಾ ಮಾರ್ತಾಂಡ ಸಂಭೂತಂ ತಂ ನಮಾಮಿ ಶನೈಶ್ಚರಂ ಸೂರ್ಯಪುತ್ರೋ ದೀರ್ಘದೇಹೋ ವಿಶಾಲಾಕ್ಷ ಶಿವಪ್ರಿಯಃ ಮಂದಾಚಾರ ಪ್ರಸನ್ನಾತ್ಮ ಪೀಡಾಂ ಹರತು ಮೇ ಶನಿಃ ಶನಿ ದೇವರಿಗೆ ಪ್ರಿಯವಾದ ಧಾನ್ಯ ಎಳ್ಳು ಹಾಗಾಗಿ ಎಳ್ಳೆಣ್ಣೆಯಿಂದ ಬೆಳ್ಳಿದೀಪ ಬೆಳಗಿದರೆ ಶುಭಫಲ ಮತ್ತು ಗುಪ್ತರೋಗಗಳು ಪರಿಹಾರವಾಗುವುದು. 19 ಶನಿವಾರ ಈ ರೀತಿ ದೀಪ ಬೆಳಗಿಸಿದಲ್ಲಿ ನ್ಯಾಯಾಲಯದಲ್ಲಿರುವ ವ್ಯಾಜ್ಯಗಳಿಗೆ ಪರಿಹಾರ ದೊರಕುವುದು, ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ, ವ್ಯಾಪಾರದಲ್ಲಿ ನಷ್ಟ ಅನುಭವಿಸುತ್ತಿರುವವರಿಗೆ ಆರ್ಥಿಕವಾಗಿ ಚೇತರಿಕೆ ಕಂಡು ಬರುತ್ತದೆ. ರಾಹು ಅರ್ಧಕಾಯಂ ಮಹಾವೀರ್ಯಂ ಚಂದ್ರಾದಿತ್ಯ ವಿಮರ್ಧನಂ ಸಿಂಹಕಾ ಗರ್ಭ ಸಂಭೂತಂ ತಂ ರಾಹುಂ ಪ್ರಣಮಾಮ್ಯಹಂ ಈ ಮಂತ್ರದ ಮೂಲಕ ಬೆಳ್ಳಿ ದೀಪ ಬೆಳಗಿದಲ್ಲಿ ಪೂರ್ವಜರಿಂದ ಬಂದ ಪಾಪಗಳ ನಿವಾರಣೆಯಾಗುತ್ತದೆ, ಸರ್ಪದೋಷ ನಿವಾರಣೆ, ಬಡತನ ನಿವಾರಣೆ ಆಗುತ್ತದೆ. ತುಪ್ಪ ಬಳಸಿ ದೀಪ ಹಚ್ಚಿದಲ್ಲಿ ನಾಗಹತ್ಯಾ ದೋಷ ನಿವಾರಣೆ ಆಗುತ್ತದೆ, ಪುರಾತನ ರೋಗ ನಿವಾರಣೆ, ಅನಾರೋಗ್ಯ, ನರ ದೌರ್ಬಲ್ಯ ಇತ್ಯಾದಿ ತೊಂದರೆಗಳಿಂದ ಮುಕ್ತಿ ದೊರೆಯುತ್ತದೆ. ಕೇತು ಪಾಲಾಶ ಪುಷ್ಪ ಸಂಕಾಶಂ ತಾರಾಗ್ರಹ ಮಸ್ತಕಂ ರೌದ್ರಂ ರೌದ್ರಾತ್ಮಕಂ ಘೋರಂ ತಂ ಕೇತುಂ ಪ್ರಣಮಾಮ್ಯಹಂ ಈ ಮಂತ್ರದ ಮೂಲಕ ಬೆಳ್ಳಿ ದೀಪ ಬೆಳಗಿದಲ್ಲಿ ಅಪಘಾತ ಭೀತಿ ದೂರವಾಗುತ್ತದೆ, ಕೆಲಸ ಕಾರ್ಯಗಳಲ್ಲಿನ ವಿಘ್ನ ದೂರವಾಗುತ್ತದೆ, ಪುತ್ರ ಸಂತಾನದ ಅಪೇಕ್ಷೆ ಇದ್ದವರು 21 ದಿನಗಳ ಕಾಲ ತುಪ್ಪದಿಂದ ಬೆಳ್ಳಿ ದೀಪ ಬೆಳಗಿಸಿದರೆ ಮನೋಭಿಲಾಷೆ ಪೂರ್ಣವಾಗುತ್ತದೆ. ಕೇತುವಿನ ಎದುರು ಬೆಳ್ಳಿ ದೀಪ ಬೆಳಗಿದರೆ ಮೋಕ್ಷಪ್ರಾಪ್ತಿಯಾಗುತ್ತದೆ ಹಾಗೆಯೇ ಗಂಗಾಸ್ನಾನದ ಫಲದೊರೆಯುತ್ತದೆ ಎಂದು ಶಾಸ್ತ್ರ ಹೇಳುತ್ತದೆ.

ದಿನ ಭವಿಷ್ಯ - 01/7/2026 - ಬುಧವಾರ - ಇಂದಿನ ಭವಿಷ್ಯವಾಣಿ | today's horoscope in kannada daily astrology

SIT ಅಧಿಕಾರಿಗಳ ತನಿಖೆ..ಮಹತ್ವದ ಮಾಹಿತಿ ಬಹಿರಂಗ | News Hour | Ayodhya Ram Mandir Donation Scam

ಕರ್ನಾಟಕ BJP ಕತೆ ಫಿನಿಶ್ ! ಕೈಚೆಲ್ಲಿದ ಶಾ ! 2028ಗೂ ವನವಾಸ ಫಿಕ್ಸ್ ! TMCಗಿಂತ ಕೆಟ್ಟಸ್ಥಿತಿಗೆ ಕರ್ನಾಟಕ BJP !

ಶ್ರೀ ವಿಷ್ಣುಸಹಸ್ರನಾಮ | Vishnu Sahasranamam |Kannada Lyrics | Sindhu Smitha |1000 names of Lord Vishnu

ಸಿಂಹ ರಾಶಿ,ಜೂನ್ 30, 2026 ನಿಮಗೆ ಲಾಟರಿ ಹೊಡೆದಿದೆ. ಈ ಘಟನೆ ಹೇಗೂ ಆಗುತ್ತದೆ.। Singh Rashi

Pure Silver pooja items collection | ನಮ್ಮ ಮನೆಯ ಬೆಳ್ಳಿ ಪೂಜಾ ಸಾಮಗ್ರಿಗಳು

ಮನೆಯಲ್ಲಿ ಯಾವ ದೀಪ ಹಚ್ಚಿದರೆ ಒಳಿತು | maneyalli yava deepa hacha beku |

ಮನೆಯಲ್ಲಿ ದೀಪ ಹೇಗೆ ಹಚ್ಚ ಬೇಕು!? ಎಷ್ಟು ಬತ್ತಿ ಹಾಕಿದರೆ ಉತ್ತಮ!? Jyotishi Dr.GopalaKrishna Sharma|Heggadde

ದೇವರ ಮನೆ ಹೊಸದಾಗಿ ಮಾಡೋಕೆ ಮತ್ತೆ ಹೋದೆ | Silver giftry | Roopa Prabhakar Vlogs | Chickpet shopping

ಕಾಮಾಕ್ಷಿ ದೀಪ ಎಂದರೇನು? | what is mean by Kamakshi Deepa | ಕಾಮಾಕ್ಷಿ ದೀಪದ ಸಂಪೂರ್ಣ ಮಾಹಿತಿ #veenaramesh

Gajendra Moksha (Lyrical video) | ಗಜೇಂದ್ರ ಮೋಕ್ಷ (ಸಾಹಿತ್ಯದೊಂದಿಗೆ)

ಹೊಸದಾಗಿ ಕಾಮಾಕ್ಷಿ ದೀಪ ತಗೊಳ್ತಾ ಇದಿರಾ, ಇಂತಹ ದೀಪವನ್ನ ಖರೀದಿಸಬೇಡಿ,ದೀಪದ ಬತ್ತಿ ಪೂರ್ತಿ ಸುಟ್ಟು ಹೋದರೆ ಇದೇ ಅರ್ಥ.

#moneytipsಹಣವನ್ನು ಆಕರ್ಷಿಸುವ ಈ ವಸ್ತುಗಳನ್ನು ಲಾಕರ್ ನಲ್ಲಿ ಇಡುವುದರಿಂದ ನಿಮ್ಮ ಆರ್ಥಿಕ ಸಮಸ್ಯೆಗೆ ಶಾಶ್ವತ ಪರಿಹಾರ

ವರಮಹಾಲಕ್ಷ್ಮಿ ಹಬ್ಬಕ್ಕೆ ಬೆಳ್ಳಿ ತಗೊಂಡೆ!!!! / Silver collection 😊 #moneysavingtips #investing

DAILY HOROSCOPE | 01ST JUNE 2026 | DINA BHAVISHYA | SHIVA SWAMY | ದಿನ ಭವಿಷ್ಯ | ಬುಧವಾರ | WEDNESDAY

Sri Venkateshwara Suprabhatam | Kousalya Supraja Rama | Sindhu Smitha | Venkateshwara Stothra |

ಇಲ್ಲಿ ಗೆಲುವು ಖಚಿತ ~ ಫಲಿತಾಂಶ ರೋಮಾಂಚಕ! ~ ಮಿಸ್ ಮಾಡದೇ

ದೇವರ ಮನೆಯಲ್ಲಿ ಯಾವ ಯಾವ ವಸ್ತು ಇರಬೇಕು?ಎಲ್ಲಿ ಇರಬೇಕು?/what all things to be kept in pooja room

